Headlines

ಶಬ್ದ ನಿಯಂತ್ರಣ ನೀತಿಗೆ ಧಕ್ಕೆ: ಚಾಮರಾಜನಗರದಲ್ಲಿ ಮೈಕಾಸುರ ಅಬ್ಬರಕ್ಕೂ ಪೊಲೀಸರ ಮೌನ!

ವರದಿ: ರಾಮಸಮುದ್ರ ಎಸ್‌.ವೀರಭದ್ರಸ್ವಾಮಿ ಚಾಮರಾಜನಗರ: ಯಾವ್ದೆ ರಸ್ತೆ ಸಂಚಾರ ಅವ್ಯವಸ್ಥೆ ಉಂಟಾಗದಂತೆ ಪಾರ್ಕಿಂಗ್ ಹಾಗೂ ದ್ಚನಿವರ್ದಕಗಳ ನಿಯಮಗಳನ್ನೊಳಗೊಂಡ ನಂತರ ಕಾರ್ಯಕ್ರಮ ಆಯೋಜನೆಗಳಿಗೆ ಅನುಮತಿ ನೀಡಬೇಕು ಎಂಬ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇತ್ತೀಚೆಗೆ ಚಾಮರಾಜನಗರ ಪಟ್ಟಣದೊಳಗೆ ಅನುಮತಿಸತಕ್ಕ ಕಾರ್ಯಕ್ರಮಗಳಿಗೆ ಅತಿಥಿಗಳನ್ನ ಕರೆಯೋದು ಸಹಜ..ಕೆಲವರಂತು ಅವರವರ ಅನುಕೂಲಕ್ಕೆ ತಕ್ಕಂತೆ ಅತಿಥಿಗಳನ್ನ ಕರೆಯುವುದು,ಉದ್ಘಾಟಸುವುದು, ಸನ್ಮಾನ ಸ್ವೀಕರಿಸುವುದು ಸಾಮಾನ್ಯವಾಗಿದೆ. ಕಾರ್ಯಕ್ರಮಗಳಿಗೆ ಪೊಲೀಸ್ ವರೀಷ್ಟಾದಿಕಾರಿಗಳನ್ನ ಕರೆದರೆ ಪಾರ್ಕಿಂಗ್ ವ್ಯವಸ್ಥೆ ಸುಗಮವಾಗಿ ಉಚಿತವಾಗಿ ನೋಡಿಕೊಳ್ತಾರೆ ಅಂತ ಗಣ್ಯರಾಗಿ ಪರಿಗಣಿಸೋದು ಸಹಜವಾಗಿದೆ..ಅಂತ…

Read More

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಕ್ಕೆ ಮಹಿಳಾ ಆಯೋಗದ ಮನವಿ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಕ್ರಮ ಮದ್ಯ ಮಾರಾಟ ಹಾಗೂ ಮದ್ಯದ ವ್ಯಸನದಿಂದ ಕುಟುಂಬಗಳು ಬೀದಿಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ರಾಜ್ಯ ಮಹಿಳಾ ಆಯೋಗವು ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ​ಜಿಲ್ಲಾ ಪ್ರವಾಸದ ವೇಳೆ ಮಹಿಳೆಯರ ಅಳಲು​ಇತ್ತೀಚೆಗೆ ಅಧ್ಯಕ್ಷರು ಕಲಬುರಗಿ, ಶಿವಮೊಗ್ಗ, ಬೀದರ್‌, ತುಮಕೂರು ಮತ್ತು…

Read More

ನರೇಗಾ ಹೆಸರು ಬದಲಾವಣೆ ವಿರೋಧಿಸಿ ಸಿದ್ದರಾಮಯ್ಯ-ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಳಗಾವಿ: ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರಿನಿಂದ ಮಹಾತ್ಮ ಗಾಂಧಿಯ ಹೆಸರನ್ನು ತೆಗೆದುಹಾಕಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಬುಧವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಈ ಪ್ರತಿಭಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವ ವಹಿಸಿದರು. ಸುವರ್ಣ ಸೌಧದ ಗಾಂಧಿ ಪ್ರತಿಮೆ ಎದುರು ನಡೆದ ಈ ಪ್ರತಿಭಟನೆಯಲ್ಲಿ ಸಚಿವರು, ಶಾಸಕರು ಹಾಗೂ ವಿಧಾನ ಪಾರಿಷತ್ ಸದಸ್ಯರು ಪಾಲ್ಗೊಂಡರು. ಮಾಧ್ಯಮದವರೊಡನೆ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ಹೇಳಿಕೆಯ ಪ್ರಕಾರ, ನರೇಗಾ ಯೋಜನೆ…

Read More

ಲೋಕಾಯುಕ್ತ ಬಲೆಗೆ ನಾಲ್ವರು ಸರ್ಕಾರಿ ಅಧಿಕಾರಿಗಳು: ₹18.20 ಕೋಟಿ ಅಕ್ರಮ ಆಸ್ತಿ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಮುಂದುವರಿಸಿರುವ ಲೋಕಾಯುಕ್ತ ಪೊಲೀಸರು, ಮಂಗಳವಾರ ಮುಂಜಾನೆ ಏಕಕಾಲಕ್ಕೆ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಅಂದಾಜು 18.20 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ​ಮಂಡ್ಯ, ಧಾರವಾಡ, ಹೊಸಪೇಟೆ ಹಾಗೂ ಶಿವಮೊಗ್ಗದ ಲೋಕಾಯುಕ್ತ ಠಾಣೆಗಳಲ್ಲಿ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಒಟ್ಟು 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ​ದಾಳಿಗೆ…

Read More

ಲೋಕ್ ಅದಾಲತ್‍ನಲ್ಲಿ 1,20,045 ಪ್ರಕರಣಗಳು ಇತ್ಯರ್ಥ : ಪ್ರಸಕ್ತ ವರ್ಷದಲ್ಲಿ 4ಅದಾಲತ್ ಅಲ್ಲಿ 400432 ಪ್ರಕರಣ ಇತ್ಯರ್ಥ: ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ

ವರದಿ: ರಾಮಸಮುದ್ರ ಎಸ್.ವೀರಭದ್ರ ಚಾಮರಾಜನಗರ, 16:- ಈ ಬಾರಿಯ ಲೋಕ್ ಅದಾಲತ್‍ನಲ್ಲಿ 1,20,045 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ಹೇಳಿದರು.

Read More

ಮಂಡ್ಯದಲ್ಲಿ ಲೋಕಾಯುಕ್ತ ದಾಳಿ: ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಯ ಕಚೇರಿ, ಮನೆಯಲ್ಲಿ ದಾಖಲೆಗಳ ಪರಿಶೀಲನೆ

ಮಂಡ್ಯ:ಮಂಡ್ಯ ನಗರದ ಬನ್ನೂರು ರಸ್ತೆಯಲ್ಲಿರುವ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವಿ.ಎಸ್. ಬೈರೇಶ್ ರವರ ಕಚೇರಿಯ ಮೇಲೆ ಮಂಗಳವಾರ ಬೆಳಗಿನ ಜಾವ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದೆ. ಲೋಕಾಯುಕ್ತ ಅಧಿಕಾರಿಗಳು ಮಂಡ್ಯದಲ್ಲಿರುವ ಕಚೇರಿಯ ಜೊತೆಗೆ ವಿ.ಎಸ್. ಬೈರೇಶ್ ರವರ ಮಂಡ್ಯ ಹಾಗೂ ವಳಗೆರೆಹಳ್ಳಿಯಲ್ಲಿರುವ ನಿವಾಸಗಳ ಮೇಲೂ ಏಕಕಾಲಕ್ಕೆ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಪ್ರಮುಖ ದಾಖಲೆಗಳು ಮತ್ತು ಹಣಕಾಸು ದಾಖಲೆಗಳನ್ನು ನಿಖರವಾಗಿ ಪರಿಶೀಲಿಸುತ್ತಿದ್ದಾರೆ ಎಂದು…

Read More

ಶ್ರೀರಂಗಪಟ್ಟಣ ಪಂಚಾಯತ್ ಇಲಾಖೆಯಲ್ಲಿ ಇ-ಖಾತಾ ತಿದ್ದುಪಡಿಯಲ್ಲಿ ಭಾರಿ ಭ್ರಷ್ಟಾಚಾರದ ಶಂಕೆ!

ಮಂಡ್ಯ/ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಇ-ಖಾತಾ ತಿದ್ದುಪಡಿಯಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪ್ರಾಪರ್ಟಿ ದಾಖಲೆ ತಿದ್ದುಪಡಿ ಹೆಸರಿನಲ್ಲಿ ಅನಧಿಕೃತ ವರ್ಗಾವಣೆ ಪ್ರಕರಣಗಳು ಬೆಳಕಿಗೆ ಬಂದಿದ್ದು, ಪಂಚಾಯತ್ ಆಡಳಿತದ ನೌಕರರ ಪಾತ್ರದ ಮೇಲೆ ಗಂಭೀರ ಅನುಮಾನಗಳು ಉದ್ಭವಿಸಿವೆ. ಗ್ರಾಮ ಪಂಚಾಯಿತಿಯ ಇತ್ತೀಚಿನ ಸಾಮಾನ್ಯ ಸಭೆ ನಡವಳಿಕೆಯಲ್ಲಿ, ಹಿಂದಿನ ತಿಂಗಳಲ್ಲಿ ನಡೆದಿದ್ದ ಕೆಲವು ಇ-ಖಾತಾ ತಿದ್ದುಪಡಿ ಪ್ರಕ್ರಿಯೆಗಳಲ್ಲಿ ಹಳೆ ಸಭಾ ನಿರ್ಣಯಗಳನ್ನು ಸುಳ್ಳಾಗಿ ದಾಖಲಿಸಿಕೊಂಡಿರುವುದು, ಮಾಲೀಕರ ಫೋಟೋ ಬದಲಾವಣೆ, ಪೂರಕ ದಾಖಲೆಗಳಿಲ್ಲದೇ ತಿದ್ದುಪಡಿ ಹಾಗೂ ಎಂಆರ್…

Read More

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ-ಡಿ.ಕೆ.ಶಿ ಕ್ಲೈಮ್ಯಾಕ್ಸ್ ಫೈಟ್!

ಕಾಂಗ್ರೆಸ್‌‍ ನಲ್ಲಿನ ಕುರ್ಚಿ ಕಿತ್ತಾಟ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಇಂದು ನಡೆಯುವ ಮಹತ್ವದ ಸಭೆಯಲ್ಲಿ ಎಲ್ಲಾ ಗೊಂದಲಗಳಿಗೂ ಇತಿಶ್ರೀ ಬೀಳುವ ಸಾಧ್ಯತೆ ಇದೆ. ನಿನ್ನೆ ರಾತ್ರಿ ದೆಹಲಿಯಿಂದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಭೇಟಿ ಮಾಡಲು ಮುಖ್ಯಮಂತ್ರಿಯ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತ್ಯೇಕ ಸಮಯ ಕೇಳಿದ್ದಾರೆ.ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಿದ್ದರಾಮಯ್ಯನವರು ಖರ್ಗೆಯವರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಅನಂತರ ಡಿ.ಕೆ.ಶಿವಕುಮಾರ್‌ಅವರು ಖರ್ಗೆ ಅವರ ಮನೆಗೆ…

Read More

ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛ ಸಂವಾದ ಸಭೆ

ಸಕಲೇಶಪುರ: ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಸಾರ್ವಜನಿಕ ಅಭಿವೃದ್ಧಿಯ ಉದ್ದೇಶದಿಂದ ಸ್ವಚ್ಛ ಸಂವಾದ ಸಭೆ ಗುರುವಾರ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಿ ಕೇಂದ್ರ ರೈಲ್ವೆ ಇಲಾಖೆಗೆ ಕಳುಹಿಸಲಾಗುವುದು ಎಂದು ಹಿರಿಯ ವಿಭಾಗ ವೈದ್ಯಾಧಿಕಾರಿ ಡಾ. ಅಕ್ಷತಾ ಆರ್ ಅವರು ತಿಳಿಸಿದರು. ಪುರಸಭೆ ಸದಸ್ಯ ಪ್ರಜ್ವಲ್ ಗೌಡ ಅವರು ಮಾತನಾಡಿ, ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛ ಕುಡಿಯುವ ನೀರಿನ ಸೌಲಭ್ಯವನ್ನು ಸುಧಾರಿಸುವ ಅಗತ್ಯವಿದೆ ಎಂದು ಹೇಳಿದರು. ಜೊತೆಗೆ, ಗುಡ್ಡ ಕುಸಿತದಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು…

Read More

ಚಿತ್ತಾಪುರ: ಆರೆಸ್ಸೆಸ್-ಭೀಮ್ ಆರ್ಮಿ ಪಥಸಂಚಲನ ಸಮರದ ಬೆನ್ನಲ್ಲೇ ಮತ್ತೆರಡು ಸಂಘಟನೆಗಳಿಂದಲೂ ಪಥಸಂಚಲನಕ್ಕೆ ಅರ್ಜಿ!

ಕಲಬುರಗಿ, ಅಕ್ಟೋಬರ್ 23: ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರ ಜಿಲ್ಲೆಯ ಚಿತ್ತಾಪುರ ಸದ್ಯ ರಾಜ್ಯಾದ್ಯಂತ ಸುದ್ದಿಯಲ್ಲಿದೆ. ಏಕೆಂದರೆ ಆರ್​​ಎಸ್​ಎಸ್​ ಪಥಸಂಚಲನ ಸಂಬಂಧ ಭಾರೀ ಪೈಪೋಟಿ ನಡೆದಿದ್ದು, ನವೆಂಬರ್ 2ರಂದು ಕೋರ್ಟ್ ಮೆಟ್ಟಿಲೇರಿ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್​ಎಸ್​ಎಸ್​ ಅನುಮತಿಗಾಗಿ ಅರ್ಜಿ ಸಲ್ಲಿಸಿದೆ. ಇದಕ್ಕೆ ಪ್ರತಿಯಾಗಿ ದಲಿತ ಸಂಘಟನೆ ಭೀಮ್ ಆರ್ಮಿ ಸಹ ಅಂದೇ ಪಥಸಂಚಲನಕ್ಕೆ ಅನುಮತಿ ನೀಡಬೇಕೆಂದು ಕಲಬುರಗಿ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ. ಇದೀಗ ಕುರುಬ ಸಮುದಾಯ ಸಹ ಎಸ್​​ಟಿ ಮೀಸಲಾತಿಗಾಗಿ ಪ್ರತಿಭಟನೆ ಮಾಡಲು…

Read More
error: Content is protected !!