Headlines

ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ: ಹೈಕೋರ್ಟ್ ತೀರ್ಪು

ಬೆಂಗಳೂರು, ಜುಲೈ 16: ಅವ್ಯವಹಾರ ವಿಡಿಯೋ ಸಾಕ್ಷಿ ಮೂಲಕ ಸಾಬೀತಾದ ಬೆನ್ನಲ್ಲಿಯೇ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡಿದೆ. ಆದ್ರೆ, ಇದನ್ನು ಪ್ರಶ್ನಿಸಿ ದೇಗುಲದ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ರಾಜ್ಯಸರ್ಕಾರದ ಈ ಕ್ರಮಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.ಗಾಳಿ ಆಂಜನೇಯ ದೇವಾಲಯದಲ್ಲಿ ಹಣ ದುರುಪಯೋಗದ ಆರೋಪವಿದೆ. ಹೀಗಾಗಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪೆನ್ನಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ…

Read More

ಕುಕ್ಕುಟ ಸಂಜೀವಿನಿ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿ:ಕೆ.ಆರ್.ನಂದಿನಿ

ಮಂಡ್ಯ.ಜು.16:- ಸ್ವ ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡಲು ಸರ್ಕಾರದಲ್ಲಿ ಅವಕಾಶವಿದೆ. ಆಸಕ್ತಿ ಹೊಂದಿರುವ ಸ್ವಸಹಾಯ ಗುಂಪುಗಳನ್ನು ಕುಕ್ಕುಟ ಸಂಜೀವಿನಿ ಯೋಜನೆಯಡಿ ಸೌಲಭ್ಯ ಪಡೆಯಲು ಪ್ರಸ್ತಾವನೆ ಸಲ್ಲಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ ಅವರು ಹೇಳಿದರು. ಮಂಗಳವಾರ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯ ಲಾಭ ಪಡೆದು ಮೇಕೆ ಮತ್ತು ಕೋಳಿ ಸಾಕಾಣಿಕೆಯಲ್ಲಿ ಯಶಸ್ಸು ಕಂಡ ಮದ್ದೂರು ತಾಲೂಕಿನ ತೈಲೂರು ಗ್ರಾಮದ ಕೃಷಿಕ ಜಗದೀಶ್…

Read More

ಬಿಎಂಟಿಸಿ-ಕೆ.ಎಸ್.ಆರ್.ಟಿ.ಸಿ ಸೇರಿ 4 ನಿಗಮಗಳಿಂದ ಆಗಸ್ಟ್ 5 ರಂದು ಸಾರಿಗೆ ಮುಷ್ಕರಕ್ಕೆ ಕರೆ

ಬೆಂಗಳೂರು, ಜುಲೈ 16: ರಾಜ್ಯದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಂದಿನ ಆಗಸ್ಟ್​ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳ ಸಾರಿಗೆ ನೌಕರರು ಈ ಮುಷ್ಕರಕ್ಕೆ ಮುಂದಾಗಿದ್ದಾರೆ. ಕಳೆದ ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು. ಆದರೆ…

Read More

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಲು ಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು, ಜುಲೈ 15: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ಬಿ.ಎಂ.ಪಾರ್ವತಿ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಜು.15) ಖಾಸಗಿ ದೂರು ವಿಚಾರಣೆ ನಡೆಯಿತು. ವಿಚಾರಣೆಗೂ ಮುನ್ನ ಲೋಕಾಯುಕ್ತ ತನಿಖಾಧಿಕಾರಿ ಈವರೆಗಿನ ತನಿಖಾ ಪ್ರಗತಿ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದರು. ಈ ವೇಳೆ, ದೂರುದಾರ ಸ್ನೇಹಮಯಿ ಕೃಷ್ಣ ಅವರು, “ತಾವು ಸಲ್ಲಿಸಿದ ದಾಖಲೆಗಳನ್ನು ಲೋಕಾಯುಕ್ತ…

Read More

ಪಂಚಭೂತಗಳಲ್ಲಿ ಅಭಿನಯ ಸಾಮ್ರಾಜ್ಞಿ ಬಿ‌.ಸರೋಜಾದೇವಿ ಲೀನ

ಬೆಂಗಳೂರು/ಚನ್ನಪಟ್ಟಣ, ಜುಲೈ 15: ಹಲವು ದಶಕಗಳ ಕಾಲ ಬಹುಭಾಷೆಗಳಲ್ಲಿ ನಟಿಸಿದ್ದ ಕನ್ನಡದ ಮೊಟ್ಟಮೊದಲ ಸೂಪರ್‌ ಸ್ಟಾರ್‌ ನಟಿ ಪ್ರತಿಷ್ಠಿತ ಪದಭೂಷಣ ಪ್ರಶಸ್ತಿ ಪುರಸ್ಕೃತೆ ಬಿ.ಸರೋಜಾದೇವಿ ಅವರು ಪಂಚಭೂತಗಳಲ್ಲಿ ಇಂದು ಲೀನವಾದರು. ಕುಟುಂಬ ಸದಸ್ಯರ ಆಕ್ರಂದನ, ಅಭಿಮಾನಿಗಳ ಭಾರ ಹೃದಯದ ನಡುವೆಯೇ ವಯೋಸಹಜತೆಯಿಂದ ನಿಧನರಾಗಿದ್ದ ಬಿ.ಸರೋಜಾದೇವಿ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಸ್ವಗ್ರಾಮ ದಶವಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿಸಲಾಯಿತು. ಅವರ ಪುತ್ರ ಗೌತಮ್‌ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿಕೊಟ್ಟರು.: ಸುಮಾರು…

Read More

ರೈತರ ಹೋರಾಟಕ್ಕೆ ಮಣಿದ ರಾಜ್ಯಸರ್ಕಾರದಿಂದ ದೇವನಹಳ್ಳಿ ಭೂಸ್ವಾಧೀನ ರದ್ದು!

ಬೆಂಗಳೂರು, ಜುಲೈ 15: ಕೃಷಿ ಭೂಮಿಯನ್ನು ಸ್ವಾಧೀನ ಮಾಡುವ ಕ್ರಮಕ್ಕೆ ವಿರೋಧಿಸಿ ನೊಂದ ರೈತರು ನಡೆಸಿದ ಸತತ ಹೋರಾಟಕ್ಕೆ‌ ಕೊನೆಗೂ ಮಣಿದಿರುವ ರಾಜ್ಯಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಸ್ಥಾಪನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಟ್ಟು ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಅಧಿಸೂಚನೆಯನ್ನು ರದ್ದುಪಡಿಸಿದೆ. ಇದರಿಂದಾಗಿ ಕಳೆದ ಹಲವು ತಿಂಗಳಿನಿಂದ ತಮ್ಮ ಜಮೀನು ಉಳಿಸಿಕೊಳ್ಳಲು ಪ್ರತಿಭಟನೆ ನಡೆಸುತ್ತಿದ್ದ ಅನ್ನದಾತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಸಿಎಂ…

Read More

ನನ್ನ ಇಲಾಖೆಯಲ್ಲಿ ಅನುದಾನ ಬಿಡುಗಡೆಯಾಗದ ಬಗ್ಗೆ ಸುರ್ಜೇವಾಲ ಚರ್ಚಿಸಿದರು: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು, ಜುಲೈ 15: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲಾರನ್ನು ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಹೀಗೆ ಮಾತಾಡಿದರು: “ನಿರ್ದಿಷ್ಟವಾಗಿ ಅವರೇನೂ ತನಗೆ ಹೇಳಲಿಲ್ಲ, ತಮ್ಮ ಇಲಾಖೆಯಿಂದ ಏನೆಲ್ಲ ಕೆಲಸಗಳಾಗಿವೆ ಅಂತ ಅವರಿಗೆ ಹೇಳಿದ್ದೇನೆ, ಕ್ಷೇತ್ರಾವಾರು ಅನುದಾನಗಳನ್ನು ಬಿಡುಗಡೆ ಮಾಡಿರುವ ಬಗ್ಗೆಯೂ ಅವರ ಗಮನಕ್ಕೆ ತರಲಾಗಿದೆ ಎಂದು ಹೇಳಿದರು. ಕೆಲ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಕೆಲಸವಾಗಿಲ್ಲ, ಅನುದಾನ ಬಿಡುಗಡೆ ಮಾಡಿಲ್ಲ ಅಂತ ಸುರ್ಜೇವಾಲಾ ಅವರಿಗೆ ಹೇಳಿದ್ದಾರೆ, ಅದರ ಬಗ್ಗೆ ಚರ್ಚೆಯಾಯಿತು,…

Read More

ಸುರ್ಜೇವಾಲ ತಮ್ಮ ಪಕ್ಷದ ಶಾಸಕರನ್ನು ಬಂದೋಬಸ್ತ್‌ ಮಾಡಿಕೊಳ್ಳಲು ಪ್ರತ್ಯೇಕ ಸಮಾಲೋಚನೆ

ಬೆಂಗಳೂರು,ಜು.14- ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಇಂದು ಬೆಂಗಳೂರಿಗೆ ಆಗಮಿಸಿ ಶಾಸಕರು ಹಾಗೂ ಸಚಿವರ ಜೊತೆ ಮೂರನೇ ಸುತ್ತಿನ ಸಮಾಲೋಚನಾ ಸಭೆಯನ್ನು ಮುಂದುವರೆಸಿದ್ದಾರೆ.ಈಗಾಗಲೇ ಎರಡು ಹಂತದಲ್ಲಿ ಶಾಸಕರ ಜೊತೆ ಪ್ರತ್ಯೇಕ ಮಾತುಕತೆ ನಡೆಸಿ ಅಭಿಪ್ರಾಯ ಸಂಗ್ರಹಿಸಿರುವ ಸುರ್ಜೇವಾಲ, ಮೂರನೇ ಹಂತದಲ್ಲಿ ಹದಿನೈದಕ್ಕೂ ಹೆಚ್ಚು ಮಂದಿ ಶಾಸಕರು ಹಾಗೂ ಮೊದಲ ದಿನ 10ಕ್ಕೂ ಹೆಚ್ಚು ಮಂದಿ ಸಚಿವರ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ. ಈ ಮೊದಲು ಶಾಸಕರ ಜೊತೆಗಿನ ಸಮಾಲೋಚನೆ ವೇಳೆ ಬಹಳಷ್ಟು ಮಂದಿ ತಮ್ಮ…

Read More

ಶಕ್ತಿ ಯೋಜನೆಗೆ 12 ಸಾವಿರದ 800 ಕೋಟಿ ಅನುದಾನ: ಪಿ. ರವಿಕುಮಾರ್

ಮಂಡ್ಯ.ಜು.14:- ರಾಜ್ಯಾದ್ಯಂತ ಪಂಚ ಗ್ಯಾರಂಟಿಗಳು ಎರಡೂ ವರ್ಷಗಳನ್ನು ಪೂರೈಸಿದೆ. ಶಕ್ತಿ ಯೋಜನೆ ಒಂದಕ್ಕೆ 12 ಸಾವಿರದ 800 ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಅವರು ತಿಳಿಸಿದರು. ಇಂದು (ಜು.14) ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ದಿ ಕಾರ್ಯಕ್ರಮಗಳ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಶಕ್ತಿ ಯೋಜನೆ…

Read More

ನಾಳೆ ಮೇರು ನಟಿ ಬಿ. ಸರೋಜಾದೇವಿ ಅಂತ್ಯಸಂಸ್ಕಾರ

ಬೆಂಗಳೂರು, ಜುಲೈ 14: ಕನ್ನಡ ಚಿತ್ರರಂಗದ ಮೇರು ನಟಿ ಬಿ.ಸರೋಜಾದೇವಿ ಅವರ ಅಂತ್ಯಸಂಸ್ಕಾರ ನಾಳೆ (ಜುಲೈ 15)ರಂದು ಮಂಡ್ಯ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶಾವರದಲ್ಲಿ ನೆರವೇರಲಿದೆ. ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದ ಸರೋಜಾದೇವಿ ಅವರ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಿಗ್ಗೆ 11.30ರ ವರೆಗೆ ಏರ್ಪಡಿಸಲಾಗಿದ್ದು, ನಂತರ ದಶಾವರದಲ್ಲಿ ತಾಯಿ ಸಮಾಧಿ ಪಕ್ಕದಲ್ಲಿ ನೆರವೇರಲಿದೆ. ಸರೋಜಾದೇವಿ ಪುತ್ರ ಗೌತಮ್ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದು, ನಾಳೆ ಬೆಳಿಗ್ಗೆ 11.30ರ ನಂತರ ಪಾರ್ಥಿವ ಶರೀರವನ್ನು ಚನ್ನಪಟ್ಟಣಕ್ಕೆ ಕರೆದೊಯ್ಯಲಾಗುವುದು. ಅಲ್ಲಿ ದಶಾವರದ…

Read More
error: Content is protected !!