Headlines

2028ಕ್ಕೂ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು

ಬೆಂಗಳೂರು, ಜುಲೈ 11: ಮುಂದಿನ 2028 ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರೇ ಮತ್ತೆ ಸಿಎಂ ಅಭ್ಯರ್ಥಿಯೆಂದು ನಾನು ಹೇಳುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಿನ್ನೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಾನು 5 ವರ್ಷದ ಸಿಎಂ ಆಗಿ ಇರುತ್ತೇನೆ. ಜೊತೆಗೆ ಮುಂದೆ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾನೇ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ಎಂದು ಹೇಳಿದ್ದರು‌. ಆದರೆ ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆಯನ್ನು ಇಂದು ಸಚಿವ ಸತೀಶ್ ಜಾರಕಿಹೊಳಿ…

Read More

ಬೆಂಗಳೂರಿನಲ್ಲಿ ಕೊಯಮತ್ತೂರು ಬಾಂಬ್ ಸ್ಫೋಟದ ಆರೋಪಿ‌ ಅರೆಸ್ಟ್!

ವಿಜಯಪುರ, ಜುಲೈ 10: ತಮಿಳುನಾಡಿನ ಕೊಯಮತ್ತೂರಿನಲ್ಲಿ 1998ರಲ್ಲಿ ನಡೆದಿದ್ದ ಸರಣಿ ಬಾಂಬ್​ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ರಾಜ್ಯದ ವಿಜಯಪುರದಲ್ಲಿ ಬಂಧಿಸಲಾಗಿದೆ. ಕೊಯಮತ್ತೂರು ಬಾಂಬ್​ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಿದ್ದಿಕಿ ರಾಜ್​​ನನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ. ಸ್ಫೋಟ ಬಳಿಕ ತಮಿಳುನಾಡಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ಸಿದ್ದಿಕಿರಾಜ್​​ ಕಳೆದ 27 ವರ್ಷಗಳಿಂದ ಬೇರೆ ಬೇರೆ ಸ್ಥಳಗಳಲ್ಲಿ ಅಡಗಿಕೊಂಡಿದ್ದನು. ಕೊನೆಗೆ ವಿಜಯಪುರ ನಗರದಲ್ಲಿ ಗುಪ್ತವಾಗಿ ಠಿಕಾಣಿ ಹೂಡಿದ್ದನು. ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವನಾದ ಸಿದ್ದಿಕಿರಾಜ್​ 1998ರಲ್ಲಿ ಕೊಯಮತ್ತೂರಿನಲ್ಲಿ ನಡೆದ ಸರಣಿ…

Read More

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಅಭದ್ರ!ದಲಿತ ಸಿಎಂ ಆಗಲು ರಹಸ್ಯ ಲಾಬಿ!!!

ದೆಹಲಿಯಲ್ಲಿರುವ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಇನ್ನೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಮೊದಲೇ ಇಂದು ಆತುರದಿಂದ ನಾನೇ ಕರ್ನಾಟಕದಲ್ಲಿ 5 ವರ್ಷ ಸಿಎಂ ಆಗಿರುತ್ತೇನೆ, 2028 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದರೂ ನಾನೇ ಮತ್ತೆ ಸಿಎಂ ಆಗುತ್ತೇನೆ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಕೇವಲ ಕೆಲವು ಶಾಸಕರ ಬೆಂಬಲ ಮಾತ್ರ ಇದೆಯೆಂದು ಮಾಧ್ಯಮಗಳಿಗೆ ಹೇಳಿಕೊಂಡಿದ್ದಾರೆ.ಇದರಿಂದ ಈವರೆಗೂ ಸಿಎಂ ಆಕಾಂಕ್ಷಿಯೇ ನಾನಲ್ಲ ಎಂದು ಹೇಳುತ್ತಾ ಬಂದಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಯಾವಾಗ ಸಿದ್ದರಾಮಯ್ಯ…

Read More

ಟ್ವಿಟರ್ ಸಂಸ್ಥಾಪಕನಿಂದ ಸಿಮ್-ಇಂಟರ್ನೆಟ್ ಇಲ್ಲದೆ ಚಾಟಿಂಗ್ ಮಾಡುವ ಆ್ಯಪ್ ಬಿಡುಗಡೆ!

ವಾಟ್ಸಪ್ ಸದ್ಯ ವಿಶ್ವದ ಅತ್ಯಂತ ಜನಪ್ರಿಯ ಇನ್ಸ್ಟೆಂಟ್ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ. ಇದು ಪ್ರತಿದಿನ ಸುಮಾರು 295 ಕೋಟಿ ಸಕ್ರಿಯ ಬಳಕೆದಾರರನ್ನು ಹೊಂದಿದೆ. ಆದರೆ ಶೀಘ್ರದಲ್ಲೇ, ಮೆಟಾದ ಈ ಇನ್ಸ್ಟೆಂಟ್ ಮೆಸೇಜಿಂಗ್ ಅಪ್ಲಿಕೇಶನ್‌ನ ಕ್ರೇಜ್ ಕೊನೆಗೊಳ್ಳುವ ಸಂಭವವಿದೆ. ಟ್ವಿಟ್ಟರ್ (ಈಗ X) ಸಹ-ಸಂಸ್ಥಾಪಕ ಜ್ಯಾಕ್ ಡಾರ್ಸೆ ಇಂಟರ್ನೆಟ್ ಅಥವಾ ಸಿಮ್ ಕಾರ್ಡ್ ಬಳಸಲು ಅಗತ್ಯವಿಲ್ಲದ ಮೆಸೇಜಿಂಗ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದ್ದಾರೆ. ಇದು ಮಾತ್ರವಲ್ಲದೆ, ಈ ಅಪ್ಲಿಕೇಶನ್ ವಾಟ್ಸ್​ಆ್ಯಪ್ ನಂತೆಯೇ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ವೈಶಿಷ್ಟ್ಯದೊಂದಿಗೆ ಬರುತ್ತದೆ, ಅಂದರೆ ಅದರಲ್ಲಿನ…

Read More

ಈ ಅವಧಿಯಲ್ಲೇ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ: ನೊಣವಿನಕೆರೆ ಶ್ರೀಗಳ ಸ್ಫೋಟಕ ಭವಿಷ್ಯ!

ದಾವಣಗೆರೆ, ಜುಲೈ 10: ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ 5 ವರ್ಷಗಳ ಕಾಲ ನಾನೇ ಸಿಎಂ ಆಗಿರುತ್ತೇನೆ, 2028ರಲ್ಲೂ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಡಿ.ಕೆ ಶಿವಕುಮಾರ್ ಅವರಿಗೆ ಕೆಲವು ಶಾಸಕರಷ್ಟೇ ಬೆಂಬಲ ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇತ್ತ ನೊಣವಿನಕೆರೆಯ ಶ್ರೀ ಶಿವಯೋಗಿಸ್ವರ ಸ್ವಾಮೀಜಿಗಳು ಈ ಅವಧಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸ್ಫೋಟಕ ರಾಜಕೀಯ ಭವಿಷ್ಯ ನುಡಿದಿದ್ದಾರೆ. ಹೌದು, ಈ ಅವಧಿಯಲ್ಲೇ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು…

Read More

GO BACK ನಂದಿನಿ…!

ಇವರ ಹೆಸರು: K R ನಂದಿನಿ.ಊರು: ಮೂಲತಃ ಕೋಲಾರ ಜಿಲ್ಲೆಯವರಾಗಿದ್ದು ಪ್ರಸ್ತುತ ಮಂಡ್ಯ ಜಿಲ್ಲೆಗೆ ಸೊಸೆಯಾಗಿದ್ದಾರೆ.ವಿದ್ಯಾರ್ಹತೆ : ಇದೇ ನಮ್ಮ ಬೆಂಗಳೂರಿನ ಎಂ.ಎಸ್ ರಾಮಯ್ಯ ಇನ್ಸ್ಟಿಟ್ಯೂಟ್ ನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದು 2014ನೇ ಬ್ಯಾಚ್ನ UPSC ಯಲ್ಲಿ 849ನೇ ರಾಂಕ್ ಪಡೆದು IRS ಅಧಿಕಾರಿಯಾಗಿ 2016 ರ ವರೆಗೂ ಕಾರ್ಯನಿರ್ವಹಿಸಿದ್ದು ತಮ್ಮ ನಾಲ್ಕನೇ ಅಟೆಂಪ್ಟ್ ನಲ್ಲಿ ಇಡೀ ದೇಶಕ್ಕೇ ಒಂದನೇ ರಾಂಕ್ ಪಡೆದು IAS ಅಧಿಕಾರಿಗಳಾಗಿರುತ್ತಾರೆ ಮತ್ತು ಒಂದು ಹೆಣ್ಣು ದೇಶಕ್ಕೇ ಟಾಪರ್ ಆಗಿ ಬಂದದ್ದು…

Read More

ದೆಹಲಿ: ಸಿಎಂ ಸಿದ್ದರಾಮಯ್ಯರ ಬೇಡಿಕೆಗಳಿಗೆ ರಕ್ಷಣಾ ಸಚಿವರಿಂದ ಗ್ರೀನ್ ಸಿಗ್ನಲ್!

ನವದೆಹಲಿ, ಜುಲೈ 9: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಶುರುವಾಗಿದೆ. ನಾಡಹಬ್ಬಕ್ಕೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ಸಿದ್ಧತೆಗಳು ಸದ್ದಿಲ್ಲದೆ ಶುರುವಾಗುತ್ತಿವೆ. ಇನ್ನು ಈ ಬಾರಿ ಮೈಸೂರು ದಸರಾದಲ್ಲಿ ಏರ್​ ಶೋ ಆಯೋಜಿಸಲು ರಾಜ್ಯಸರ್ಕಾರ ಮುಂದಾಗಿದ್ದು, ಇದಕ್ಕೆ ಅನುಮತಿ ನೀಡುವಂತೆ ಖುದ್ದು ಸಿಎಂ ಸಿದ್ದರಾಮಯ್ಯ ಅವರು ಇಂದು(ಜುಲೈ 9) ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಇದಕ್ಕೆ ರಾಜನಾಥ್ ಸಿಂಗ್ ಸಹ ಸಮ್ಮತಿಸಿದ್ದಾರೆ. ಜೊತೆಗೆ ವಿವಿಧ ಯೋಜನೆಗಳಿಗಾಗಿ ರಕ್ಷಣಾ ಇಲಾಖೆಯ ಭೂಮಿ…

Read More

ಸಿಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಎಂಎಲ್‌ಸಿ ರವಿಕುಮಾರ್ ಗೆ ಜಾಮೀನು

ಬೆಂಗಳೂರು, ಜುಲೈ 9: ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ ರವಿಕುಮಾರ್​​ ಗೆ ಜಾಮೀನು ಸಿಕ್ಕಿದೆ. ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ವೇಳೆ ಸಿಎಸ್​​ ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬಳಿಕ ರವಿಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. 1 ಲಕ್ಷ ಬಾಂಡ್, ಒಬ್ಬರು ಶ್ಯೂರಿಟಿ ಒದಗಿಸಲು ಸೂಚನೆ…

Read More

ಹೃದಯಾಘಾತಕ್ಕೆ ರಾಜ್ಯಾದ್ಯಂತ ಒಟ್ಟು 6 ಸಾವು!

ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಪಳಿ ಜೋರಾಗಿ ಮುಂದುವರೆದಿದೆ.ಕಳೆದೊಂದು ದಿನದಲ್ಲಿ ರಾಜ್ಯಾದ್ಯಂತ ಒಟ್ಟು 6 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ 4ನೇ ತರಗತಿ ವಿದ್ಯಾರ್ಥಿ! ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮನೋಜ್ ಕುಮಾರ್ (10), ಮೃತ ದುರ್ದೈವಿ. ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ. ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ​…

Read More

ಸಿಎಂ-ಡಿಸಿಎಂ ಹೆಸರೇಳಿ ಕೋಟ್ಯಂತರ ರೂ. ವಂಚಿಸಿದ್ದ ಮಹಿಳೆ ಅರೆಸ್ಟ್!

ಬೆಂಗಳೂರು, ಜುಲೆ 9: ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹೆಸರು ಹೇಳಿಕೊಂಡು ಗಾಳ ಹಾಕುತ್ತಿದ್ದ ಸವಿತಾ ಎನ್ನುವ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ ಎಂದು ತಿಳಿದುಬಂದಿದ್ದು, ಈ ಸಂಬಂಧ…

Read More
error: Content is protected !!