ಸಕ್ಕರೆ ನಾಡಿನ ಪೊಲೀಸ್ ಗದ್ದುಗೆಗೆ ಶೋಭಾರಾಣಿ ಎಂಟ್ರಿ: ಮೈಸೂರಿಗೆ ಮಲ್ಲಿಕಾರ್ಜುನ ಬಾಲದಂಡಿ ಶಿಫ್ಟ್
ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಮೈಸೂರು ಜಿಲ್ಲೆಯ ಜವಾಬ್ದಾರಿ ನೀಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಮಂಡ್ಯದಲ್ಲಿ ‘ಜನಸ್ನೇಹಿ ಪೊಲೀಸ್’ ಪರಿಕಲ್ಪನೆಯನ್ನು ಜಾರಿಗೆ ತಂದು ಮೆಚ್ಚುಗೆ ಗಳಿಸಿದ್ದ ಬಾಲದಂಡಿ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ, ಸದ್ಯ ಬಳ್ಳಾರಿ ಎಸ್ಪಿಯಾಗಿರುವ ಶೋಭಾರಾಣಿ ವಿ.ಜೆ. ಅವರನ್ನು ನೇಮಕ ಮಾಡಲಾಗಿದೆ. ನೂತನ ಎಸ್ಪಿಯಾಗಿ ಬರಲಿರುವ ಶೋಭಾರಾಣಿ ಅವರು 2016ರ ಬ್ಯಾಚ್ನ ಅಧಿಕಾರಿಯಾಗಿದ್ದು, ಮಂಡ್ಯ ಜಿಲ್ಲೆಯ ಭೌಗೋಳಿಕ ಮತ್ತು ಅಪರಾಧ ಹಿನ್ನೆಲೆಯ…

