Headlines

ಸಸ್ಪೆನ್ಸ್, ಕಾಮಿಡಿ, ಥ್ರಿಲ್ಲರ್ ಜತೆಗೆ ಸಾಮಾಜಿಕ ಸಂದೇಶ ಹೊತ್ತ “ನ್ಯೂಟನ್ಸ್ 3rd ಲಾ” ಸಿನಿಮಾ ನಾಳೆ ಬಿಡುಗಡೆ

ಬೆಂಗಳೂರು: ಇದೇ ತಿಂಗಳ 24ರಂದು “ನ್ಯೂಟನ್ಸ್ 3rd ಲಾ” ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಸುಧಾಕರ್ ರೆಡ್ಡಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾ, ಯೌವನದ ಉಲ್ಲಾಸ, ಸ್ನೇಹ ಮತ್ತು ರಹಸ್ಯಗಳ ಸಂಯೋಜನೆಯ ಕಥಾಬಿಂಬ ಹೊಂದಿದೆ. ವಿಶು ನಾಯಕನಾಗಿ ಹಾಗೂ ವಿದ್ಯಾಶ್ರೀ ಗೌಡ ನಾಯಕಿಯಾಗಿ ಅಭಿನಯಿಸಿರುವ ಚಿತ್ರದಲ್ಲಿ ವಿಜಯ್ ಚೆಂಡೂರ್, ಅಂಬರೀಶ್ ಸಾರಂಗಿ, ಶ್ರೀನಿಧಿ ಭಟ್, ಅಥರ್ವ, ರೋಹಿತ್, ಸುನಂದಾ ಕಲಬುರ್ಗಿ, ಮೀನಾಕ್ಷಿ ಆತ್ರಿ, ಶ್ವೇತಾ, ಗಂಧರ್ವ ರಾಯರವುತ್ತ, ಮಹೇಶ್ ಬಾಬು, ಸತೀಶ್ ಮತ್ತು ಅರ್ಜುನ್ ಹುಣಸೂರ ಸೇರಿದಂತೆ ಅನೇಕರೂ…

Read More

ಸುಳ್ಳು ಪ್ರಕರಣ ದಾಖಲಿಸಿದವರ ವಿರುದ್ದ ರೊಚ್ಚಿಗೆದ್ದ ಗ್ರಾಮಸ್ಥರು! ಎಸ್ಪಿ ಕಛೇರಿ ಮುತ್ತಿಗೆ, ಮುಖ್ಯದ್ವಾರದಲ್ಲೆ ಬಂದೂಬಸ್ತ್

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ವೀರನಪುರ ಗ್ರಾಮ ಸಭೆಯಲ್ಲಿ ಅಶಾಂತಿ ಮೂಡಿಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ 17 ಮಂದಿಯ ಮೇಲೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ರೊಚ್ಚಿಗೆದ್ದ ಎಲ್ಲ ಸಮುದಾಯದವರು ಎಸ್ಪಿ ಕಚೇರಿ ಮುತ್ತಿಗೆ ಹಾಕಲು ಬಂದಿದ್ದ ಘಟನೆ ಇಂದು ನಡೆದಿದೆ‌.ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದ ಶಿವಕುಮಾರ್ ನೀಡಿದ ದೂರಿನನ್ವಯ ಗುಂಡ್ಲುಪೇಟೆ ಪೊಲೀಸರು ವೀರನಪುರ ಗ್ರಾಮದ 17 ಮಂದಿಯ ಮೇಲೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಪ್ರಕರಣ…

Read More

ರಾಷ್ಟ್ರೀಯ ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ರಾಷ್ಟ್ರೀಯ ಸ್ವಯಂಸೇವಕರ ಸಂಘ(ಆರ್‌ಎಸ್‌ಎಸ್) ವತಿಯಿಂದ ವಿಜಯದಶಮಿ ಉತ್ಸವದ ಅಂಗವಾಗಿ ನಗರದಲ್ಲಿ ಆಕರ್ಷಕ ಪಥಸಂಚಲನ ಕಾರ್ಯಕ್ರಮ ಇಂದು ಜರುಗಿತು. ನಗರದ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಆರಂಭವಾದ ಪಥಸಂಚಲನ ನಗರದ ಪ್ರಮುಖರ ಬೀದಿಗಳಲ್ಲಿ ಹಾಗೂ ವೃತ್ತಗಳಲ್ಲಿ ಸಂಚರಿಸಿ ನೋಡುಗರ ಗಮನ ಸೆಳೆಯಿತು. ನಗರದ ಪ್ರಮುಖ ವೃತ್ತಗಳಲ್ಲಿ ಹಾಗೂ ಪ್ರಮುಖ ಬೀದಿಗಳಲ್ಲಿ ಕಟ್ಟಿದ್ದ ಭಗವಾ ಧ್ವಜ, ಕೇಸರಿ ತೋರಣಗಳು, ಹಾಗೂ ವಿಶೆಷವಾಗಿ ಮನೆಗಳ ಮುಂದೆ ಪಥ ಸಂಚಲನಕ್ಕಾಗಿ ಹಾಕಲಾಗಿದ್ದ ರಂಗೋಲಿಗಳು ಜನರನ್ನು ಮತ್ತಷ್ಟು ಆಕರ್ಷಿಸುತ್ತಿದ್ದವು. 450ಕ್ಕೂ…

Read More

ಮೈಸೂರು: ಮಗಳ ಅಶ್ಲೀಲ ವಿಡಿಯೋ ವೈರಲ್, ಕೈ ಮುಖಂಡನ ವಿರುದ್ಧ ತಂದೆ ದೂರು, ಎಫ್ಐಆರ್ ದಾಖಲು

ಮೈಸೂರು, ಅಕ್ಟೋಬರ್ 18: ಜಿಲ್ಲೆಯ ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್​​ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್​​ ಆಗಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ಮೈಸೂರು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ. ಕಳೆದ ಅಕ್ಟೋಬರ್ 16ರಂದು ರಾತ್ರಿ 9:20 ಗಂಟೆಗೆ ಸೋಮೇಗೌಡ ಬಿನ್ ಲೇಟ್ ಮಲೆಗೌಡ ಎಂಬುವರ ದೂರಿನ ಸಾರಾಂಶವೆನೆಂದರೆ, ನಾನು ವ್ಯವಸಾಯ ಕಸುಬನ್ನು ಮಾಡಿಕೊಂಡಿರುತ್ತೇನೆ. ನನಗೆ…

Read More

ಎ ಖಾತೆ ನೆಪದಲ್ಲಿ 15 ಸಾವಿರ ಕೋಟಿ ಸುಲಿಗೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಮಂಡ್ಯ, ಅಕ್ಟೋಬರ್ 16: ದೀಪಾವಳಿ ಕೊಡುಗೆ ನೆಪದಲ್ಲಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಕೈ ಸರ್ಕಾರ ಎ ಖಾತಾ ಸೋಗಿನಲ್ಲಿ 15,000 ಕೋಟಿ ರೂ. ಸುಲಿಗೆ ಮಾಡುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ನಗರದ ಸಂಜಯ್‌ ವೃತ್ತದಲ್ಲಿ ಹೊಸದಾಗಿ ನಿರ್ಮಿಸಿರುವ ಸುಸಜ್ಜಿತ ಆಟೋ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಾವಳಿ ಕೊಡುಗೆ ಎಂದರೆ ಏನೋ ನಮಗೆ…

Read More

ಹಲವು ವರ್ಷಗಳಿಂದ ಶ್ರಮವಹಿಸಿ ವ್ಯಾಪಾರ ಮಾಡುತ್ತಿರುವ ವರ್ತಕರಿಗೆ ನೂತನ ಮಾರುಕಟ್ಟೆಯ ಮಳಿಗೆಗಳ ಹಂಚಿಕೆ: ಎಚ್.ಡಿ ಕುಮಾರ ಸ್ವಾಮಿ

ಮಂಡ್ಯ.ಅ.16:-ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವರ್ತಕರ ಮಾರುಕಟ್ಟೆಯ ಮಳಿಗೆಗಳನ್ನು ಹಲವು ವರ್ಷಗಳಿಂದ ಶ್ರಮವಹಿಸಿ ವ್ಯಾಪಾರ ಮಾಡಿಕೊಂಡು ಬರುತ್ತಿರುವಂತಹ ವರ್ತಕರಿಗೆ ಹಂಚಲಾಗುವು ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಕೇಂದ್ರ ಬೃಹತ್ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ .ಕುಮಾರಸ್ವಾಮಿ ಅವರು ಹೇಳಿದರು. ಇಂದು (ಅ.16) ನಗರದ ಪೇಟೆ ಬೀದಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಮಾರುಕಟ್ಟೆ ಯನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಜನರ ಆಶೀರ್ವಾದದಿಂದ ಕೇಂದ್ರ ಇಂದು ಮಂತ್ರಿಯಾಗಿದ್ದೇನೆ ಅಂದಿನ ಇಲ್ಲಿಯವರೆಗೂ ಜಿಲ್ಲಾಧಿಕಾರಿಗಳ ಜೊತೆ…

Read More

ಪ್ರತಿ ಸೋಮವಾರ ತಾ.ಪಂ. ಹಾಗೂ ಗ್ರಾ.ಪಂ.ಗಳಲ್ಲಿ ಕಡ್ಡಾಯವಾಗಿ ಕುಂದುಕೊರತೆ ಸಭೆ ಆಯೋಜಿಸಲು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಸೂಚನೆ

ಮಂಡ್ಯ.ಅ.16:- ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಗಳು ಮತ್ತು ಗ್ರಾಮ ಪಂಚಾಯತ್ ಗಳು ಸಾರ್ವಜನಿಕ ಸೋಮವಾರ ಕಾರ್ಯಕ್ರಮವನ್ನು ಆಯೋಜಿಸಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಬೇಕು ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಾ.ಪಂ. ಇಓ ಹಾಗೂ ಗ್ರಾ.ಪಂ.ಗಳ ಪಿಡಿಓಗಳಿಗೆ ಸೂಚನೆ ನೀಡಿದರು.  ಬುಧವಾರ ಮಳವಳ್ಳಿ ತಾಲ್ಲೂಕು ಪಂಚಾಯತ್ ನಲ್ಲಿ ನಡೆದ ತಾಲ್ಲೂಕು ಮಟ್ಟದ ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಾರ್ವಜನಿಕರ ಸೋಮವಾರ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸುತ್ತಿಲ್ಲವೆಂಬ ದೂರುಗಳು ಬರುತ್ತಿವೆ. ಈ ರೀತಿಯ ದೂರುಗಳಿಗೆ…

Read More

ರಾಜ್ಯಾದ್ಯಂತ ಏಕಕಾಲಕ್ಕೆ ಲೋಕಾಯುಕ್ತ ದಾಳಿ: 12 ಭ್ರಷ್ಟ ಅಧಿಕಾರಿಗಳ ಅಕ್ರಮ ಆಸ್ತಿ ಬಯಲು

ಇಂದು ಮಂಗಳವಾರ ಅಕ್ಟೋಬರ್ 14 ರ ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಏಕಕಾಲದಲ್ಲಿ 12 ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಅಕ್ರಮವಾಗಿ ಗಳಿಸಿದ್ದ ಸಂಪತ್ತು ಬಯಲಿಗೆಳೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬಂದ ದೂರುಗಳನ್ನು ಆಧರಿಸಿ ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಹಾವೇರಿ, ಉಡುಪಿ, ಕಲಬುರ್ಗಿ, ಬೆಂಗಳೂರು ಸೇರಿ 40ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಇಲಾಖೆ ಮಿಂಚಿನ ದಾಳಿ ನಡೆಸಿದೆ. ಬೀದರ್ ಜಿಲ್ಲೆಯ ಔರಾದ್‌ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಅವರ…

Read More

ಗಣಪತಿ ವಿಸರ್ಜನೆ: ವ್ಯಾಪಕ ಬಂದೂಬಸ್ತ್, ಪಥಸಂಚಲನ.

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ಪಟ್ಟಣದಲ್ಲಿ ಪ್ರತಿಷ್ಟಾಪಿಸಲಾದ ಗಣಪತಿ ವಿಸರ್ಜನಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡಸಿದರು. ಚಾಮರಾಜನಗರ ಎಸ್ಪಿ ಬಿಟಿ ಕವಿತಾ ಅವರ ನೇತೃತ್ವದಲ್ಲಿ ಎಸ್ಪಿ, 5 ಡಿವೈಸ್ಪಿ, 14ಪಿಐ, 36ಪಿಎಸ್ಐ, 58 ಎಎಸ್ಐ,362 ಪೇದೆ,ಮುಖ್ಯಪೇದೆ, 22 ಮಹಿಳಾ ಸಿಬ್ಬಂದಿ, 11 ವಿಡಿಯೋಗ್ರಾಪರ್, 200 ಗೃಹರಕ್ಷಕ ಸಿಬ್ಬಂದಿ, 5 ಕೆಎಸ್ಆರ್ಪಿ ಪಾರ್ಟಿ, ,6 ಡಿಎಆರ್ ಸೇರಿದಂತೆ ಒಟ್ಟು 709 ಸಿಬ್ಬಂದಿಗಳನ್ನ ನಿಯೋಜಿಸಲಾಗಿದೆ . ಗಣಪತಿ ವಿಸರ್ಜನ‌ಮಹೋತ್ಸದ ಮೆರವಣಿಗೆ ಬೀದಿಗಳಲ್ಲಿ ಎರಡು ಡ್ರೋನ್ ಬಳಸುವುದರ…

Read More

ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಕುಸಿತ, ಸಿಎಂ ವಿರುದ್ಧ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಸಂದರ್ಭದಲ್ಲಿ ಮಾತ್ರ ತವರು ಜಿಲ್ಲೆ ಅನ್ನುತ್ತಾರೆ ಅಷ್ಟೆ  ಮೈಸೂರು ನಗರದಲ್ಲಿ ಮೇಲಿಂದ ಮೇಲೆ ಅಪರಾಧ ಕೃತ್ಯಗಳು ನಡೆಯುತ್ತಿದ್ದು, ಇದನ್ನು ತಡೆಯುವ ಕೆಲಸ ಆಗುತ್ತಿಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ ನಡೆಸಿದರು.ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಮಾತ್ರ ಮೈಸೂರು ನನ್ನ ತವರು ಜಿಲ್ಲೆ, ಪ್ರತಿಷ್ಠೆ ಅಂತೆಲ್ಲ ಮಾತನಾಡುವ ಸಿದ್ದರಾಮಯ್ಯ ಅವರು ಈಗಲೂ ಅದೇ ರೀತಿ ಕಾಳಜಿ ತೋರಲಿ. ದಸರಾ ಸಂದರ್ಭದಲ್ಲಿ…

Read More
error: Content is protected !!