ದಲಿತ ಕೈ ನಾಯಕರ ಸೀಕ್ರೆಟ್ ಮೀಟಿಂಗ್: ಎಚ್.ಸಿ.ಮಹದೇವಪ್ಪ ಮನೆಯಲ್ಲಿ ಪರಮೇಶ್ವರ್ ಚರ್ಚೆ!
ರಾಜ್ಯ ಕಾಂಗ್ರೆಸ್ನಲ್ಲಿ ಕ್ರಾಂತಿಗೀತೆ, ಸಿಎಂ ಬದಲಾವಣೆ ಕದನ ಕಿಚ್ಚಿನ ನಡುವೆ ದಲಿತಾಸ್ತ್ರ ಪ್ರಯೋಗ ಆಗಿದೆ. ದಶಕದ ಕೂಗು ಧ್ವನಿ ಏರಿಸಿದ್ದು ದಲಿತ ನಾಯಕರಲ್ಲಿ ಹುಮ್ಮಸ್ಸು ಚಿಗುರಿದೆ. ರಾಜ್ಯ ಕಾಂಗ್ರೆಸ್ನಲ್ಲಿ ಕ್ರಾಂತಿ-ಭ್ರಾಂತಿ ವದಂತಿಗಳ ನಡುವೆ ಪಿಚ್ನಲ್ಲಿ ತಿರುವು ಕಾಣಿಸಿಕೊಂಡಿದೆ. ಅಧಿಕಾರ ಹಂಚಿಕೆ ಸೂತ್ರದ ಮರ್ಮ ಇನ್ನೂ ನಿಗೂಢ. ಇದೇ ಸೂತ್ರ ನಂಬಿ ಕೂತಿರುವ ಟ್ರಬಲ್ ಶೂಟರ್ ಡಿಕೆಶಿ, ಕುರ್ಚಿ ಪಟ್ಟ ಗಿಟ್ಟಿಸಲು ಇನ್ನಿಲ್ಲದ ಕಸರತ್ತು ನಡೆಸ್ತಿದ್ದಾರೆ. ಈ ನಡುವೆ ಅಹಿಂದ ದಾಳ ಉರುಳಿದ್ದೇ ತಡ ದಲಿತ ಸಿಎಂ ಕೂಗು…

