Headlines

ಪದ್ಮಭೂಷಣ ಹಿರಿಯ ಸಾಹಿತಿ ಎಸ್.ಎಸ್ ಭೈರಪ್ಪ ಅಸ್ತಂಗತ

ಬೆಂಗಳೂರು, ಸೆ.24: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಬಳಲುತ್ತಿದ್ದ ಭೈರಪ್ಪ ಅವರಿಗೆ ಮರವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್​.ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು, ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ…

Read More

ಸೌಜನ್ಯ ಕೇಸ್: ನಾನೇ ಸಾಕ್ಷಿ ಎಂದಿದ್ದ ಮಹಿಳೆಯ ಅಸಲಿ ವಿಷಯ ಬಹಿರಂಗ!

ಮಂಡ್ಯ, ಸೆ.24: ಸೌಜನ್ಯ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್​ ಸಿಕ್ಕಿದೆ. ಸೌಜನ್ಯ ಅತ್ಯಾಚಾರ ಕಣ್ಣಾರೆ ಕಂಡಿದ್ದೆ ಎಂದು ದೂರು ಕೊಟ್ಟಿದ್ದ ಮಂಡ್ಯ (Mandya) ಮೂಲದ ಮಹಿಳೆ ಬಗ್ಗೆ ಆಕೆಯ ಸಹೋದರನೇ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. TV9 ಜೊತೆ ಮಾತನಾಡಿರುವ ಮಹಿಳೆಯ ಸಹೋದರ ಶಿವಕೆಂಪಯ್ಯ, ಆಕೆ ಹೇಳಿದ್ದೆಲ್ಲ ಬರೀ ಸುಳ್ಳು. ಅವಳ ಹಿಂದೆ ಯಾರೋ ನಿಂತು ಈ ರೀತಿ ಹೇಳಿಸುತ್ತಿದ್ದು, ಸೌಜನ್ಯಗೆ ನ್ಯಾಯ ಕೊಡಿಸುವ ಯಾವ ಉದ್ದೇಶವೂ ಆಕೆಗೆ ಇಲ್ಲ ಎಂದಿದ್ದಾರೆ. ನನ್ನ ಸಹೋದರಿ 16 ವರ್ಷ ಇದ್ದಾಗಲೇ…

Read More

ಶೇ.50 ಸಚಿವರ ಬದಲಾವಣೆಯೊಂದಿಗೆ ನವೆಂಬರ್ ನಲ್ಲಿ ಸಂಪುಟ ಪುನಾರಚನೆ: ಸಲೀಂ ಅಹ್ಮದ್

ನವದೆಹಲಿ, ಸೆ.22: ರಾಜ್ಯ ರಾಜಕೀಯದಲ್ಲಿ ಸದ್ದಿಲ್ಲದೇ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನವೆಂಬರ್ ಗೆ ಎರಡುವರೆ ವರ್ಷ ಪೂರ್ಣಗೊಳಿಸುತ್ತದೆ. ಹೀಗಾಗಿ ನವೆಂಬರ್‌ನಲ್ಲಿ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಇದಕ್ಕೆ ಪೂರಕವೆಂಬಂತೆ ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು, ಕರ್ನಾಟಕದಲ್ಲಿ ನವೆಂಬರ್ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆಯಾಗಲಿದೆ. ಈ ವೇಳೆ ಶೇ.50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದರು. ಸಚಿವ ಸ್ಥಾನದಿಂದ ಹೊರ ಬಂದವರಿಗೆ…

Read More

ದಸರಾ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ

ಮೈಸೂರು,ಸೆ.22:- ಮೈಸೂರು ದಸರಾ ಮಹೋತ್ಸವದಲ್ಲಿ ಪ್ರವಾಸಿಗರಿಗೆ ಅತ್ಯಂತ ಆಕರ್ಷಣೀಯವಾದ ದಸರಾ ಫಲಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ನಗರದ ಕುಪ್ಪಣ್ಣ ಪಾರ್ಕ್ ನಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಆಯೋಜಿಸಲಾಗಿರುವ ದಸರಾ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಸರ್ಕಾರದ ಸಚಿವರೊಂದಿಗೆ ಕೆಲ ಕಾಲ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಗಾಂಧಿ ಮಂಟಪ: ಈ ಬಾರಿ ಜಂಬೂಸವಾರಿ ದಿನವೇ ಗಾಂಧಿ ಜಯಂತಿ ಇರುವ ಕಾರಣ ಮಹಾತ್ಮ ಗಾಂಧಿಯವರ…

Read More

ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ಮೈಸೂರು ದಸರಾಗೆ ಚಾಲನೆ ನೀಡಿದ ಬಾನು ಮುಷ್ತಾಕ್

ಮೈಸೂರು, ಸೆ.22: ವಿಶ್ವಖ್ಯಾತ ಮೈಸೂರು ದಸರಾಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರು ಅಧಿದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಂಪ್ರದಾಯಬದ್ಧವಾಗಿ ದಸರಾಗೆ ವಿದ್ಯುಕ್ತ ಚಾಲನೆ ನೀಡಿದರು.ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂತೆ ಮತ್ತಿತರ ಗಣ್ಯರೊಂದಿಗೆ ಬಾನು ಮುಷ್ತಾಕ್ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಾಲಯದ ಆವರಣದಲ್ಲಿರುವ ವಿಘ್ನ ನಿವಾರಕ ಗಣೇಶನಿಗೆ ನಮಿಸಿ ನಂತರ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ಇದಕ್ಕೂ…

Read More

ನಾಳೆ ಮಂಗಳವಾರ ಮಧ್ಯಾಹ್ನ ಜನಗಣತಿ ವರದಿ ಸಮೀಕ್ಷೆಯ ಭವಿಷ್ಯ ನಿರ್ಧರಿಸಲಿರುವ ಹೈಕೋರ್ಟ್

ಬೆಂಗಳೂರು, ಸೆ.22: ರಾಜ್ಯಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಪ್ರಶ್ನಿಸಿ ನಾಲ್ಕೈದು ಸಮುದಾಯಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿವೆ. ಈ ಅರ್ಜಿಗಳನ್ನು ಇಂದು ಹೈಕೋರ್ಟ್ ಸಿಜೆ ಅವರ ಪೀಠ ವಿಚಾರಣೆ ನಡೆಸಿದೆ. ಸರ್ವೇಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದ್ದರು. ಈ ಬಗ್ಗೆ ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ. ಹೀಗಾಗಿ ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ಭವಿಷ್ಯ…

Read More

ಮತದಾರರ ಪಟ್ಟಿ ಎಸ್‍ಐಆರ್: ಸೆ.30ರೊಳಗೆ ಪೂರ್ವ ಸಿದ್ಧತೆ ಪೂರ್ಣಗೊಳಿಸಲು ಸೂಚನೆ

ದೆಹಲಿ, ಸೆ.22 : ದೇಶಾದ್ಯಂತ ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿಗೊಳಿಸಲು ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ. ಇದರ ಅಂಗವಾಗಿ ರಾಜ್ಯಗಳ ಚುನಾವಣಾ ಅಧಿಕಾರಿಗಳಿಗೆ ಸೆಪ್ಟೆಂಬರ್ 30ರೊಳಗೆ ಎಲ್ಲಾ ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಈಗಾಗಲೇ ಸೆಪ್ಟೆಂಬರ್ ಮೊದಲ ವಾರದಲ್ಲಿ ಆಯೋಗದ ಉನ್ನತ ಅಧಿಕಾರಿಗಳು ವಿವಿಧ ರಾಜ್ಯಗಳ ಚುನಾವಣಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿದ್ದರು. ಅಲ್ಲಿ, ಮುಂದಿನ 10ರಿಂದ 15 ದಿನಗಳಲ್ಲಿ ಎಸ್‌ಐಆರ್‌ಗೆ ಸಿದ್ಧರಾಗಬೇಕೆಂದು ಮುಖ್ಯ ಚುನಾವಣಾ ಆಯುಕ್ತರು…

Read More

ಚಡಚಣ ಬ್ಯಾಂಕ್ ದರೋಡೆ ಕೇಸ್: 41.4 ಲಕ್ಷ ರೂ. ನಗದು, 6.54 ಕೆ.ಜಿ ಚಿನ್ನದ ಬ್ಯಾಗ್ ಪತ್ತೆ

ವಿಜಯಪುರ, ಸೆ.19: ಜಿಲ್ಲೆಯ ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಷ್ರದ ಹುಲಜಂತಿ ಗ್ರಾಮದ ಪಾಳು ಬಿದ್ದ ಮನೆಯೊಂದರಲ್ಲಿ ಮೇಲ್ಚಾವಣಿಯಲ್ಲಿ ಬ್ಯಾಗ್‌ ಪತ್ತೆಯಾಗಿದ್ದು, ಈ ಬ್ಯಾಗ್‌ನಲ್ಲಿ ಒಟ್ಟು 41.4 ಲಕ್ಷ ರೂ. ನಗದು ಹಾಗೂ 6.54 ಕೆ.ಜಿ. ಚಿನ್ನಾಭರಣ (136 ಬಂಗಾರದ ಪ್ಯಾಕೇಟ್) ಸಿಕ್ಕಿದೆ. ಮಹಾರಾಷ್ಟ್ರದ ಹುಲಜಂತಿ ಗ್ರಾಮದ ಶೀಟು ಹಾಕಿದ ಪಾಳು ಬಿದ್ದ ಮನೆಯ ಛಾವಣಿಯ ಮೇಲೆ ಚಿನ್ನ ಹಾಗೂ ನಗದು ತುಂಬಿದ ಬ್ಯಾಗ್ ಪತ್ತೆಯಾಗಿದೆ. ಚಡಚಣ ಬ್ಯಾಂಕ್ ದರೋಡೆ ಮಾಡಿದ ಆರೋಪಿಗಳು ಸಾರ್ವಜನಿಕರಿಂದ…

Read More

ಸಮೀಕ್ಷೆ ವೇಳೆ ಹಿಂದೂ ಜಾತಿ ಹೆಸರಿನ ಜೊತೆಗೆ ಕ್ರೈಸ್ತ ಹೆಸರು, ಹೊಸ ಜಾತಿ ಸೇರ್ಪಡೆ ಕೈಬಿಡಲು ಸಿಎಂ ಸೂಚನೆ

ಬೆಂಗಳೂರು, ಸೆ.19: ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಜನರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಶುರುವಾಗಲಿದೆ. ಆದರೇ, ಜಾತಿಯ ಕಾಲಂನಲ್ಲಿ ಕುರುಬ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ದಲಿತ ಕ್ರಿಶ್ಚಿಯನ್ ಎಂದೆಲ್ಲಾ ಉಲ್ಲೇಖ ಮಾಡಲಾಗಿತ್ತು. ಹಿಂದೂ ಧರ್ಮದ ವಿವಿಧ ಜಾತಿಗಳಿಂದ ಕ್ರಿಶ್ಚಿಯನ್ ಧರ್ಮದ ಮತಾಂತರವಾದವರು ಹಿಂದೂ ಜಾತಿಯ ಜೊತೆಗೆ ಕ್ರಿಶ್ಚಿಯನ್ ಧರ್ಮದ ಹೆಸರಿನಿಂದಲೂ ಕರೆದುಕೊಳ್ಳಲು ಸಮೀಕ್ಷೆಯ ಕಾಲಂನಲ್ಲಿ ಅವಕಾಶ ನೀಡಲಾಗಿತ್ತು. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇಲ್ಲದೇ ಇರೋ ಹೊಸ ಜಾತಿಗಳನ್ನೇ ಈ ಸಮೀಕ್ಷೆ ವೇಳೆ ಹುಟ್ಟು ಹಾಕಲಾಗಿದೆ…

Read More

ಬೆಂಗಳೂರು ಮಳೆ ಹಾನಿ ಪ್ರದೇಶ ಪರಿಶೀಲನೆ: ತಕ್ಷಣ ಕ್ರಮಕ್ಕೆ ಸೂಚನೆ ನೀಡಿದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಇಂದು ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಮಳೆಯಿಂದಾಗಿ ಹಾನಿಯುಂಟಾದ ಸ್ಥಳಗಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್‍ನಲ್ಲಿ ಜಲಾವೃತವಾಗುವುದದನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿ, ಬಳಿಕ ಹೆಚ್.ಎಸ್.ಆರ್ 6ನೇ ಸೆಕ್ಟರ್ (ಮಂಗಮ್ಮನ ಪಾಳ್ಯ ಮುಖ್ಯ ರಸ್ತೆ ಬಳಿ) ಮೆಟ್ರೋ ಕಾಮಗಾರಿಯ ಮೀಡಿಯನ್ ಸರಿಯಾಗಿ ಅಳವಡಿಸದೇ ಇರುವುದು, ಅನುಪಯುಕ್ತ ಮೆಟಿರಿಯಲ್ ಅನ್ನು ಕೂಡಲೆ ತೆರವುಗೊಳಿಸಬೇಕು….

Read More
error: Content is protected !!