Headlines

ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ ಮಿದುಳು ತಿನ್ನುವ ಅಮೀಬಾ (ನೇಗ್ಲೇ ರಿಯಾ ಫೌಲೇರಿ) ಕುರಿತು ಆರೋಗ್ಯ ಸಚಿವಾಲಯದಿಂದ ಸುರಕ್ಷತಾ ಸಲಹಾ ಮಾರ್ಗಸೂಚಿ

ಮಂಡ್ಯ.ನ.19.(ಕರ್ನಾಟಕ ವಾರ್ತೆ):-ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ  (Naegleria fowleri) ಇಂದ ಉಂಟಾಗುವ ಅಮೀಬಿಕ್ಮೆ ನಿಂಗೊಎನ್ಸೆಫಲೈಟಿಸ್  (Amoebic meningoencephalitis)  ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ. 1. ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು…

Read More

ನಕಲಿ ನಂದಿನಿ ತುಪ್ಪ ತಯಾರಿಕಾ ಜಾಲ ಭೇದಿಸಿದ ಸಿಸಿಬಿ ಪೊಲೀಸರು: ನಾಲ್ವರು ಅರೆಸ್ಟ್ಬೆಂಗಳೂರು, ನ.15: ಕೆಎಂಎಫ್ ನ‌ ಜನಪ್ರಿಯ ಬ್ರಾಂಡ್ ನಂದಿನಿ ತುಪ್ಪವನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಬೇಧಿಸಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.ಹೊರ ರಾಜ್ಯದಲ್ಲಿ ಕಲಬೆರೆಕೆ ತುಪ್ಪವನ್ನು ತಯಾರಿಸಿ ನಕಲಿ ನಂದಿನಿ ಬ್ರಾಂಡ್‌ನ ಸ್ಯಾಚೆಟ್‌ ಮತ್ತು ಪ್ಲಾಸ್ಟಿಕ್‌ ಬಾಟಲಿಗಳಲ್ಲಿ ತುಂಬಿ ಬೆಂಗಳೂರು ನಗರದಾದ್ಯಂತ ಮಾರಾಟ ಮಾಡುತ್ತಿದ್ದರು.ಈ ಬೃಹತ್‌ ಜಾಲದ ಬೆನ್ನು ಹತ್ತಿತ ಪೊಲೀಸರು ನಾಲ್ವರನ್ನು ಬಂಧಿಸುವ ಜೊತೆಗೆ 1,26,95,200 ರೂ. ವೌಲ್ಯದ 8136 ಲೀಟರ್‌ ನಂದಿನಿ…

Read More

ಪೊಲೀಸ್ ಸಿಬ್ಬಂದಿ ವಿರುದ್ಧ ದಂಧೆಕೋರರಿಗೆ ಬೆಂಬಲ ಆರೋಪ: ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಮಂಡ್ಯ: ಜಿಲ್ಲೆಯಲ್ಲಿ ಅಪರಾಧ, ಜೂಜಾಟ, ಐಪಿಎಲ್ ದಂಧೆ ನಿಗ್ರಹ ಮತ್ತು ಮಾದಕ ವಸ್ತು ಸೇವನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿ ಎಸ್ಪಿಗೆ ಮನವಿ ಸಲ್ಲಿಸಿದರು.ಜಿಲ್ಲೆಯಲ್ಲಿ ಅಪರಾಧ, ಜೂಜಾಟ, ಐಪಿಎಲ್ ದಂಧೆ ನಿಗ್ರಹ ಮತ್ತು ಮಾದಕ ವಸ್ತು ಸೇವನೆ ವಿರುದ್ಧ ಕೆಲ ದಿನಗಳ ಹಿಂದೆ ತಮ್ಮ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಕ್ರಮಕ್ಕೆ ಆಗ್ರಹಿಸಲಾಗಿತ್ತು. ಕೆಲ ದಿನಗಳ ಕಾಲ ಕಟ್ಟುನಿಟ್ಟಿನ ಕ್ರಮ ವಹಿಸಿದಂತೆ ತೋರಿದರೂ ಬಳಿಕ ಮತ್ತೆ ಎಲ್ಲ ಕಾನೂನುಬಾಹಿರ ಕೃತ್ಯಗಳು…

Read More

“ಸಂಸತ್ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ 201ನೇ ವಿಜಯೋತ್ಸವ ಆಚರಣೆ — ಕನ್ನಡ ಸಂಸ್ಕೃತಿಗೆ ಪ್ರಧಾನಿಮೋದಿ ಸರ್ಕಾರದ ಗೌರವ”

ಇಂದು ನವದೆಹಲಿಯ ಸಂಸತ್ ಆವರಣದ ಪ್ರೇರಣಾ ಸ್ಥಳದಲ್ಲಿ ತುಮಕೂರು ಲೋಕಸಭಾ ಸದಸ್ಯರು ಹಾಗೂ ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣನವರ ನೇತೃತ್ವದಲ್ಲಿ ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ 201ನೇ ವಿಜಯೋತ್ಸವ ಹಾಗೂ ಜನ್ಮದಿನೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ರಾಣಿ ಚೆನ್ನಮ್ಮನವರ ಪುತ್ಥಳಿಯನ್ನು ಸಂಸತ್ತಿನ ಆವರಣದಲ್ಲಿ 2007ರಲ್ಲಿ ಸ್ಥಾಪಿಸಲಾಗಿದೆ. ಕಳೆದ ವರ್ಷ ಪ್ರಧಾನಮಂತ್ರಿ ಮಾನ್ಯ ಶ್ರೀ ನರೇಂದ್ರ ಮೋದಿಯವರ ಬೆಂಬಲ ಮತ್ತು ಲೋಕಸಭಾ ಅಧ್ಯಕ್ಷ…

Read More

2028 ರ ಅಸೆಂಬ್ಲಿ ಎಲೆಕ್ಷನ್ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಆಗಲು ಕೈ ನಾಯಕರ ಒಪ್ಪಿಗೆ ಬೇಕು: ಸಚಿವ ಸತೀಶ್ ಜಾರಕಿಹೊಳಿ

ನಿನ್ನೆಯಷ್ಟೇ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ನಂತರ 2028 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಬ್ಬ ಅಹಿಂದ ನಾಯಕರಾದ ಉತ್ತರಕರ್ನಾಟಕದ ಬೆಳಗಾವಿ ಸಾಹುಕಾರ್ ಎಂದೇ ಕರೆಯುವ ಸಚಿವ ಸತೀಶ್ ಜಾರಕಿಹೊಳಿ 2028 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭವಿಷ್ಯ ಹೇಳಿದ್ದರು. ಇಂದು ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿ, ಇಲ್ಲ, ನಾನು ಇನ್ನೂ ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಏಕೆಂದರೆ 2028 ರ ವಿಧಾನಸಭಾ…

Read More

ಸಸ್ಪೆನ್ಸ್, ಕಾಮಿಡಿ, ಥ್ರಿಲ್ಲರ್ ಜತೆಗೆ ಸಾಮಾಜಿಕ ಸಂದೇಶ ಹೊತ್ತ “ನ್ಯೂಟನ್ಸ್ 3rd ಲಾ” ಸಿನಿಮಾ ನಾಳೆ ಬಿಡುಗಡೆ

ಬೆಂಗಳೂರು: ಇದೇ ತಿಂಗಳ 24ರಂದು “ನ್ಯೂಟನ್ಸ್ 3rd ಲಾ” ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಸುಧಾಕರ್ ರೆಡ್ಡಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾ, ಯೌವನದ ಉಲ್ಲಾಸ, ಸ್ನೇಹ ಮತ್ತು ರಹಸ್ಯಗಳ ಸಂಯೋಜನೆಯ ಕಥಾಬಿಂಬ ಹೊಂದಿದೆ. ವಿಶು ನಾಯಕನಾಗಿ ಹಾಗೂ ವಿದ್ಯಾಶ್ರೀ ಗೌಡ ನಾಯಕಿಯಾಗಿ ಅಭಿನಯಿಸಿರುವ ಚಿತ್ರದಲ್ಲಿ ವಿಜಯ್ ಚೆಂಡೂರ್, ಅಂಬರೀಶ್ ಸಾರಂಗಿ, ಶ್ರೀನಿಧಿ ಭಟ್, ಅಥರ್ವ, ರೋಹಿತ್, ಸುನಂದಾ ಕಲಬುರ್ಗಿ, ಮೀನಾಕ್ಷಿ ಆತ್ರಿ, ಶ್ವೇತಾ, ಗಂಧರ್ವ ರಾಯರವುತ್ತ, ಮಹೇಶ್ ಬಾಬು, ಸತೀಶ್ ಮತ್ತು ಅರ್ಜುನ್ ಹುಣಸೂರ ಸೇರಿದಂತೆ ಅನೇಕರೂ…

Read More

ಸುಳ್ಳು ಪ್ರಕರಣ ದಾಖಲಿಸಿದವರ ವಿರುದ್ದ ರೊಚ್ಚಿಗೆದ್ದ ಗ್ರಾಮಸ್ಥರು! ಎಸ್ಪಿ ಕಛೇರಿ ಮುತ್ತಿಗೆ, ಮುಖ್ಯದ್ವಾರದಲ್ಲೆ ಬಂದೂಬಸ್ತ್

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ವೀರನಪುರ ಗ್ರಾಮ ಸಭೆಯಲ್ಲಿ ಅಶಾಂತಿ ಮೂಡಿಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ 17 ಮಂದಿಯ ಮೇಲೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ರೊಚ್ಚಿಗೆದ್ದ ಎಲ್ಲ ಸಮುದಾಯದವರು ಎಸ್ಪಿ ಕಚೇರಿ ಮುತ್ತಿಗೆ ಹಾಕಲು ಬಂದಿದ್ದ ಘಟನೆ ಇಂದು ನಡೆದಿದೆ‌.ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದ ಶಿವಕುಮಾರ್ ನೀಡಿದ ದೂರಿನನ್ವಯ ಗುಂಡ್ಲುಪೇಟೆ ಪೊಲೀಸರು ವೀರನಪುರ ಗ್ರಾಮದ 17 ಮಂದಿಯ ಮೇಲೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಪ್ರಕರಣ…

Read More

ರಾಷ್ಟ್ರೀಯ ಸ್ವಯಂಸೇವಕರಿಂದ ಆಕರ್ಷಕ ಪಥಸಂಚಲನ

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ರಾಷ್ಟ್ರೀಯ ಸ್ವಯಂಸೇವಕರ ಸಂಘ(ಆರ್‌ಎಸ್‌ಎಸ್) ವತಿಯಿಂದ ವಿಜಯದಶಮಿ ಉತ್ಸವದ ಅಂಗವಾಗಿ ನಗರದಲ್ಲಿ ಆಕರ್ಷಕ ಪಥಸಂಚಲನ ಕಾರ್ಯಕ್ರಮ ಇಂದು ಜರುಗಿತು. ನಗರದ ಚಾಮರಾಜೇಶ್ವರ ದೇವಾಲಯದ ಆವರಣದಿಂದ ಆರಂಭವಾದ ಪಥಸಂಚಲನ ನಗರದ ಪ್ರಮುಖರ ಬೀದಿಗಳಲ್ಲಿ ಹಾಗೂ ವೃತ್ತಗಳಲ್ಲಿ ಸಂಚರಿಸಿ ನೋಡುಗರ ಗಮನ ಸೆಳೆಯಿತು. ನಗರದ ಪ್ರಮುಖ ವೃತ್ತಗಳಲ್ಲಿ ಹಾಗೂ ಪ್ರಮುಖ ಬೀದಿಗಳಲ್ಲಿ ಕಟ್ಟಿದ್ದ ಭಗವಾ ಧ್ವಜ, ಕೇಸರಿ ತೋರಣಗಳು, ಹಾಗೂ ವಿಶೆಷವಾಗಿ ಮನೆಗಳ ಮುಂದೆ ಪಥ ಸಂಚಲನಕ್ಕಾಗಿ ಹಾಕಲಾಗಿದ್ದ ರಂಗೋಲಿಗಳು ಜನರನ್ನು ಮತ್ತಷ್ಟು ಆಕರ್ಷಿಸುತ್ತಿದ್ದವು. 450ಕ್ಕೂ…

Read More

ಮೈಸೂರು: ಮಗಳ ಅಶ್ಲೀಲ ವಿಡಿಯೋ ವೈರಲ್, ಕೈ ಮುಖಂಡನ ವಿರುದ್ಧ ತಂದೆ ದೂರು, ಎಫ್ಐಆರ್ ದಾಖಲು

ಮೈಸೂರು, ಅಕ್ಟೋಬರ್ 18: ಜಿಲ್ಲೆಯ ಕೆ.ಆರ್.ನಗರ ತಾಲೂಕು ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್​​ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್​​ ಆಗಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ಮೈಸೂರು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ. ಕಳೆದ ಅಕ್ಟೋಬರ್ 16ರಂದು ರಾತ್ರಿ 9:20 ಗಂಟೆಗೆ ಸೋಮೇಗೌಡ ಬಿನ್ ಲೇಟ್ ಮಲೆಗೌಡ ಎಂಬುವರ ದೂರಿನ ಸಾರಾಂಶವೆನೆಂದರೆ, ನಾನು ವ್ಯವಸಾಯ ಕಸುಬನ್ನು ಮಾಡಿಕೊಂಡಿರುತ್ತೇನೆ. ನನಗೆ…

Read More

ಎ ಖಾತೆ ನೆಪದಲ್ಲಿ 15 ಸಾವಿರ ಕೋಟಿ ಸುಲಿಗೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಮಂಡ್ಯ, ಅಕ್ಟೋಬರ್ 16: ದೀಪಾವಳಿ ಕೊಡುಗೆ ನೆಪದಲ್ಲಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಕೈ ಸರ್ಕಾರ ಎ ಖಾತಾ ಸೋಗಿನಲ್ಲಿ 15,000 ಕೋಟಿ ರೂ. ಸುಲಿಗೆ ಮಾಡುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ನಗರದ ಸಂಜಯ್‌ ವೃತ್ತದಲ್ಲಿ ಹೊಸದಾಗಿ ನಿರ್ಮಿಸಿರುವ ಸುಸಜ್ಜಿತ ಆಟೋ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಾವಳಿ ಕೊಡುಗೆ ಎಂದರೆ ಏನೋ ನಮಗೆ…

Read More
error: Content is protected !!